ಮುರುಳ್ಯ ಶಾಂತಿನಗರ ಶಾಲೆಯಲ್ಲಿ ಸ್ಕೌಟ್ ಗೈಡ್ಸ್ ಬೇಸಿಗೆ ಶಿಬಿರ ಉದ್ಘಾಟನೆ

0

ಮುರುಳ್ಯ ಶಾಂತಿನಗರ ಸ.ಹಿ.ಪ್ರಾ. ಶಾಲೆಯಲ್ಲಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಏ. 7ರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಭೂಸೇನೆ ನಿವೃತ್ತ ಯೋಧ ಮೋಹನ್ ದಾಸ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ನಡುಬೈಲು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ದಾಮೋದರ ನೇರಳ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಬೇಬಿ ಉಪಸ್ಥಿತರಿದ್ದರು ಗೈಡ್ ಕ್ಯಾಪ್ಟನ್ ಶ್ರೀಮತಿ ಸರೋಜಿನಿ ಕೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶ್ರೀಮತಿ ಬೇಬಿ ವಂದಿಸಿದರು. ಸುಮಾರು 30 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಕಾಯರ್ತಡ್ಕ ಸ. ಹಿ. ಪ್ರಾ. ಶಾಲೆಯ ಶಿಕ್ಷಕಿ ಶ್ರೀಮತಿ ರಶ್ಮಿ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಶ್ರೀಮತಿ ಬೇಬಿ ಕುಶಾಲಪ್ಪ ಇವರ ಮನೆಗೆ ಹೊರ ಸಂಚಾರ ಮಾಡಲಾಯಿತು.