ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವಿಕಾಸ ವಾಹಿನಿ ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣೆ

0

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಗುತ್ತಿಗಾರು ವಲಯದ 17 ವಿಕಾಸ ವಾಹಿನಿ ಸ್ವ ಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಎ.6ರಂದು ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಿತು‌.
ಯೋಜನಾ ನಿರ್ದೇಶಕರಾದ ಕಿರಣ್ ಉರ್ವ ರವರು ಸದಸ್ಯರಿಗೆ ಲಾಭಾಂಶದ ಚೆಕ್ ಹಸ್ತಾಂತರಿಸಿದರು. ಒಟ್ಟು ಮೊತ್ತ 4,13,070 ಲಾಭಾಂಶ ನೀಡಲಾಯಿತು.