ಅರಂಬೂರು : ರಿಕ್ಷಾಕ್ಕೆ ಬಸ್ಸು ಡಿಕ್ಕಿ

0

ರಿಕ್ಷಾದಲ್ಲಿದ್ದ ಮಹಿಳೆಗೆ ಗಂಭೀರ ಗಾಯ

ಸುಳ್ಯ ಸಮೀಪದ ಅರಂಬೂರು ಮಸೀದಿ ಬಳಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಜಖಂಗೊಂಡಿರುವ ಘಟನೆ ವರದಿಯಾಗಿದೆ.


ರಿಕ್ಷಾದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ಮೈಸೂರಿನಿಂದ ಗೋಕರ್ಣಕ್ಕೆ ಹೊರಟಿದ್ದು, ಸುಳ್ಯ ಸಮೀಪದ ಅರಂಬೂರು ತಿರುವಿನಲ್ಲಿ ರಿಕ್ಷಾವನ್ನು ಓವರ್‌ಟೆಕ್ ಮಾಡುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.