ಅಧಿಕಾರಿಗಳ ಭರವಸೆಯ ಮೇರೆಗೆ ಅರಮನೆಗಯ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು

0

ಸುಳ್ಯ ಅರಂತ್ತೊಡು ಗ್ರಾಮದ ಅರಮನೆ ಗಯಾ ಎಂಬಲ್ಲಿ ಬಲ್ನಾಡು ಹೊಳೆಗೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಅಗ್ರಹಿಸಿ ಸ್ಥಳೀಯ ನಿವಾಸಿಗಳು ಅಳವಡಿಸಿದ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಏಪ್ರಿಲ್ ೧೧ ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಸುಳ್ಯ ತಾಲೂಕು ಪಂಚಾಯತ್ ಕಾಯ೯ನಿವ೯ಹಣಾಧಿಕಾರಿ ಭವಾನಿ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರರ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದ ಕಾರಣ ಬ್ಯಾನರ್ ತೆರವುಗೋಳಿಸಲಾಯಿತು ಎನ್ನಲಾಗಿದೆ.