ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಎಸ್.ಅಂಗಾರ

0

ತತ್ ಕ್ಷಣದ ನೋವಿನಿಂದ ಹೇಳಿಕೆ ನೀಡಿದ್ದೆ – ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ

ಭಾಗೀರಥಿಯವರ ಗೆಲುವಿನ ನೇತೃತ್ವ ನಾನೇ ವಹಿಸುವೆ : ಸಚಿವ ಎಸ್.ಅಂಗಾರ

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಮೊನ್ನೆ ದಿನ ನಾನು ರಾಜಕೀಯ ನಿವೃತ್ತಿಯ ಹೇಳಿಕೆ ನೀಡಿದ್ದೆ. ಅದು ತತ್‌ಕ್ಷಣದ ನೋವಾಗಿತ್ತು. ಇದೀಗ ನನ್ನ ಹೇಳಿಕೆಯನ್ನು ನಾನು ಹಿಂಪಡೆಯುತ್ತಿದ್ದು, ರಾಜಕೀಯದಲ್ಲಿ ಈ ಹಿಂದಿನಂತೆ ಸಕ್ರಿಯನಾಗಿರುತ್ತೇನೆ.‌ ಜತೆಗೆ ನಮ್ಮ ಅಭ್ಯರ್ಥಿ ಭಾಗೀರಥಿಯವರ ಗೆಲುವಿನ ಜವಾಬ್ದಾರಿ ನಾನೇ ವಹಿಸಿಕೊಳ್ಳುವೆ ಎಂದು‌ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ‌ನಡೆಸಿದ ಸಚಿವರು ಈ‌ ವಿಷಯ ತಿಳಿಸಿದರು.

ಅಭ್ಯರ್ಥಿ ಆಯ್ಕೆಯಲ್ಲಿ ನನಗೆ ಯಾವುದೇ ಅಸಮಾಧಾನ ಇಲ್ಲ.‌ ಆದರೆ ನನಗೆ ಹೇಳದೇ ಆಯ್ಕೆ ಮಾಡಿರುವುದು ಸಣ್ಣ ನೋವಾಗಿತ್ತು. ಅದು ತತ್ ಕ್ಷಣದ ನೋವಷ್ಟೆ. ಆಗ ನಾನು ಆ ರೀತಿ ಹೇಳಿಕೆ ನೀಡಿದೆ. ಬಳಿಕ ಯೋಚಿಸಿದಾಗ ನನ್ನ‌ ನಿರ್ಧಾರದ ಅರಿವು ನನಗಾಗಿ ಆ ಹೇಳಿಕೆ ಹಿಂಪಡೆದಿದ್ದೇನೆ. ಪಕ್ಷದಲ್ಲಿ ಸಕ್ರಿಯನಾಗಿರುತ್ತೇನೆ. ಮತ್ತು ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಾನೇ ತೆಗೆದು ಕೊಳ್ಳುವುದಾಗಿ ಅವರು ಹೇಳಿದರು.

ಬಿಜೆಪಿ‌ ಮಂಡಲ ಅಧ್ಯಕ್ಷ ಹರೀಶ್ ‌ಕಂಜಿಪಿಲಿ, ಪ್ರಚಾರ ಸಮಿತಿ ಮುಖ್ಯಸ್ಥ ವೆಂಕಟ್ ದಂಬೆಕೋಡಿ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಇದ್ದರು.