ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ವಿಷುಕಣಿ- ಬಲಿವಾಡು ಕೂಟ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವಿಷು ಹಬ್ಬದ ಪ್ರಯುಕ್ತ ವಿಷುಕಣಿ ಕಾರ್ಯಕ್ರಮವು ಎ.15 ರಂದು ಬೆಳಗ್ಗೆ ನಡೆಯಿತು.
ಶ್ರೀ ದೇವರಿಗೆ ವಿಶೇಷ ಪೂಜೆಯಾಗಿ ಪ್ರಸಾದ ವಿತರಣೆಯಾಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ಪೂಜಾ ಕಾರ್ಯ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ರಘುರಾಮ ಭಟ್, ಅನುವಂಶಿಕ ಮೊಕ್ತೇಸರರು ಹಾಗೂ ವ್ಯ.ಸ.ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರತಿ ಶನಿವಾರದಂದು ನಡೆಯುವ ಬಲಿವಾಡು ಕೂಟ ಹಾಗೂ ಅನ್ನ ಪ್ರಸಾದ ವಿತರಣೆಯಾಯಿತು.