ಸುಳ್ಯಕ್ಕೆ ಆಗಮಿಸಿದ ರಮಾನಾಥ ರೈ : ಸಭೆಯಲ್ಲಿ ಚಕಮಕಿ

0

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆ ಮೇರೆಗೆ ಇಂದು ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಅಭಿಪ್ರಾಯ ಸಂಗ್ರಹಣೆಗೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ತುಂಬಿದ್ದ ಇತ್ತಂಡಗಳ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ವರದಿಯಾಗಿದೆ.


ಗ್ರಾಮ ಮಟ್ಟದ ಕಾರ್ಯಕರ್ತರೊಂದಿಗೆ ನಾಯಕರು ಅಭಿಪ್ರಾಯ ಸಂಗ್ರಹಣೆ ಕಾರ್ಯ ನಡೆಸಿದರು. ನಂದಕುಮಾರ್ ಬೆಂಬಲಿಗರು ಆಕ್ರೋಶಗೊಂಡಾಗ ನಾಯಕರು ಅವರನ್ನು ಸಮಾಧಾನಪಡಿಸಲು ಹರಸಾಹಸ ಪಡಬೇಕಾಯಿತು.