ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪರವರಿಂದ ದೇವಸ್ಥಾನ, ಮಸೀದಿ, ಚರ್ಚ್ ಗಳಿಗೆ ಭೇಟಿ – ಪ್ರಾರ್ಥನೆ

0

ಇಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ನಾಮಪತ್ರ ಸಲ್ಲಿಕೆ ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನ, ಗಾಂಧಿನಗರ ಜುಮ್ಮಾ ಮಸೀದಿ ಮತ್ತು ಬೀರಮಂಗಲ ಸೈಂಟ್ ಬ್ರಿಜಿಡ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಚೆನ್ನಕೇಶವ ದೇವಸ್ಥಾನದಲ್ಲಿ ಆಡಳಿತ ಮೊಕ್ತೆಸರ ಡಾ. ಹರಪ್ರಸಾದ್ ತುದಿಯಡ್ಕ, ಗಾಂಧಿನಗರ ಜುಮಾ ಮಸೀದಿಯಲ್ಲಿ ಜಮಾಅತ್ ಅಧ್ಯಕ್ಷ ಕೆ. ಎಂ.ಮುಸ್ತಫ, ಸೈಂಟ್ ಬ್ರಿಜಿಡ್ ಚರ್ಚ್ ನಲ್ಲಿ ಧರ್ಮಗುರು ರೆ.ಫಾ.ವಿಕ್ಟರ್ ಡಿಸೋಜ ಅಭ್ಯರ್ಥಿ ಜಿ.ಕೃಷ್ಣಪ್ಪರ ಪರವಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೊಲ್ಚಾರ್, ಎನ್.ಎಸ್ ಯು.ಐ ಅಧ್ಯಕ್ಷ ಕೀರ್ತನ್ ಕೊಡಪಾಲ ಸೇರಿದಂತೆ ಅನೇಕ ನಾಯಕರುಗಳು ಉಪಸ್ಥಿತರಿದ್ದರು.