ಗೋಪಾಲಕೃಷ್ಣ ಭಟ್ ಕಾನಾವು ನಿಧನ

0

ಮುಕ್ಕೂರು : ಪ್ರಗತಿಪರ ಕೃಷಿಕ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಕಾನಾವು ( 79) ಎ.18 ರಂದು ರಾತ್ರಿ ನಿಧನ ಹೊಂದಿದರು.

ಮೃತರು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಮೊಕ್ತೇಸರರಾಗಿ ಸೇರಿದಂತೆ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆ ಸಲ್ಲಿಸಿದರು. ಮೃತರು ಪತ್ನಿ, ಪುತ್ರ,ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಎ.19 ರಂದು ಅಂತಿಮ ದರ್ಶನಕ್ಕೆ ಅವಕಾಶ


ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಎ.19 ರಂದು ಬೆಳಗ್ಗಿನಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಮನೆಯವರು ತಿಳಿಸಿದ್ದಾರೆ.