ಜೇನು ತೆಗೆಯಲೆಂದು ಮರಕ್ಕೆ ಹತ್ತಿದ್ದ ಯುವಕ ಮರದಿಂದ ಬಿದ್ದು ಸಾವನ್ನಪ್ಪಿದ್ದ ಘಟನೆ ಎ.18 ರ ಸಂಜೆ ಸಂಪಾಜೆಯಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಕರಿಕೆ ಮೂಲದ ವಿಜಯ್ ಎಂದು ಗುರುತಿಸಲಾಗಿದೆ. ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದ್ದು, ವಿಜಯ್ ಜೇನು ತೆಗೆಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದ. ಆತ ಗಂಭೀರ ಗಾಯಗೊಂಡಿದ್ದು, ಕೂಡಲೆ ಆತನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು.
ಅದಾಗಲೇ ಆತ ಮಾರ್ಗ ಮಧ್ಯೆ ಮೃತಪ್ಪಟ್ಟಿದ್ದ. ಮೃತ ದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.