ಪಂಜದಲ್ಲಿ5 ನೇ ದಿನದ ಉಚಿತ ಭಜನಾ ತರಬೇತಿ ಶಿಬಿರ

0

ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಪಂಜ ಮತ್ತು ನಿಂತಿಕಲ್ಲು ವಲಯ , ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಸುಳ್ಯ
ಪಂಜ ಮತ್ತು ನಿಂತಿಕಲ್ಲು ವಲಯ ಇದರ ಆಶ್ರಯದಲ್ಲಿ 14ನೇ ವರ್ಷದ ಉಚಿತ ಭಜನಾ ತರಬೇತಿ ಶಿಬಿರವು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಎ.15 ರಂದು ಆರಂಭಗೊಂಡಿದ್ದು 5ನೇ ದಿನ ಮದ್ವಾಧೀಶ ವಿಠಲ ದಾಸ ನಾಮಾಂಕಿತ ರಾಮಕೃಷ್ಣ ಕಾಟುಕುಕ್ಕೆ ತಂಡದವರು ಭಜನಾ ತರಬೇತಿ ನೀಡಿದರು.ಇವರಿಗೆ ಹಾರ್ಮೋನಿಯಂ ನಲ್ಲಿ ವಾಸುದೇವ ಭಟ್,ಮೃದಂಗದಲ್ಲಿ ವೆಂಕಟ್ರಮಣ ಆಚಾರ್ಯ ಸಹಕರಿಸಿದರರು.


ಸನ್ಮಾನ : ತರಬೇತುದಾರ ರಾಮಕೃಷ್ಣ ಕಾಟುಕುಕ್ಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ನಾಗೇಶ್ ಪಿ ರವರನ್ನು ಸನ್ಮಾನಿಸಲಾಯಿತು.ಭಜನಾ ಮಂಡಳಿ ಅಧ್ಯಕ್ಷ, ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪುತ್ಯ ಸಭಾಧ್ಯಕ್ಷತೆ ವಹಿಸಿದ್ದರು. ತರಬೇತಿ ಶಿಬಿರ ಸಂಚಾಲಕ ಕುಸುಮಾಧರ ಕೆಮ್ಮೂರು,ಭಜನಾ ಮಂಡಳಿ ಪೂರ್ವಾಧ್ಯಕ್ಷ ಮಹಾಲಿಂಗ ಸಂಪ, ತಾಲೂಕು ಭಜನಾ ಪರಿಷತ್ ಸ್ಥಾಪಕಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ,
ಹಾರ್ಮೋನಿಯಂ ವಾದಕ ವಾಸುದೇವ ಭಟ್,ಮೃದಂಗ ವಾದಕ ವೆಂಕಟರಮಣ ಆಚಾರ್ಯ ಕಲ್ಮಡ್ಕ, ಶಿಕ್ಷಕಿ ಶ್ರೀಮತಿ ಸುಗಂಧಿ ಬಾಲಕೃಷ್ಣ ಪುತ್ಯ , ಶಿಕ್ಷಕಿ ಶ್ರೀಮತಿ ಸರೋಜಿನಿ ಕೆಮ್ಮೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತರಬೇತುದಾರ ಶ್ರೀಮತಿ ನಳಿನಾಕ್ಷಿ ವಿ ಆಚಾರ್ಯ ಸ್ವಾಗತಿಸಿದರು ಮತ್ತು ವಂದಿಸಿದರು.