ಪಡ್ಪಿನಂಗಡಿ: ನೇಣು ಬಿಗಿದು ಆತ್ಮಹತ್ಯೆ

0

ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.20ರಂದು ಸಂಜೆ ಬೆಳಕಿಗೆ
ಬಂದಿದೆ.


ಪಡ್ಪಿನಂಗಡಿ (ಕಜ್ಜೋಡಿ ತುಪ್ಪದ ಮನೆ) ಸುಬ್ಬಪ್ಪ ಗೌಡ ಎಂಬವರು
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.


ಮನೆಯಲ್ಲಿ ಯಾರು ಇಲ್ಲದ ವೇಳೆ
ಮನೆಯ ಹಿಂಬದಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವಿಷಯ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಬೆಳ್ಳಾರೆ ಪೋಲೀಸರು ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಅವರಿಗೆ ಸುಮಾರು 60 ವರುಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಕಮಲ, ಪುತ್ರಿ ಶ್ರೀಮತಿ ಹರಿಣಾಕ್ಷಿ ಹರೀಶ್, ಮೊಮ್ಮಗಳು ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.