ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದರ್ಖಾಸ್ತು ಮುತ್ತು ಮಾರಿಯಮ್ಮ ದೈವಸ್ಥಾನಕ್ಕೆ ಭೇಟಿ- ಮತಯಾಚನೆ

0

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಬೆಳ್ಳಾರೆ ಗ್ರಾಮದ ದರ್ಕಾಸ್ತು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು.

ಬಳಿಕ ಚುನಾವಣೆಯ ಪೂರ್ವತಯಾರಿಯ ಬಗ್ಗೆ ಬಿಜೆಪಿ ಶಕ್ತಿಕೇಂದ್ರ ವ್ಯಾಪ್ತಿಯ ಬೊಬ್ಬೆಕೇರಿ, ಕಾಣಿಯೂರು ಬೂತ್ ನಲ್ಲಿ ಗ್ರಾಮಸ್ಥರ ಮತ್ತು ಕಾರ್ಯಕರ್ತರ ಸಭೆಯನ್ನು ನಡೆಸಿ ಮತಯಾಚಿಸಿದರು.


ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಸುಳ್ಯ ಬಿಜೆಪಿ ಮಂಡಲ ಸಮಿತಿ ಪದಾಧಿಕಾರಿಗಳು, ಬಿಜೆಪಿ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಮುಖಂಡರು, ಬೂತ್ ಸಮಿತಿ ಪದಾಧಿಕಾರಿಗಳು ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.