ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರಕ್ಕೆ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಆಗಮನ

0

ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಆಗಮಿಸಿದ್ದಾರೆ.

ಇಂದು ಸುಬ್ರಹ್ಮಣ್ಯ ಭಾಗದಲ್ಲಿ ಪ್ರಚಾರ ಅಭಿಯಾನ ನಡೆಯುತ್ತಿದ್ದು, ಮಂಡಲ ಅಧ್ಯಕ್ಷ ಹರೀಶ್ ‌ಕಂಜಿಪಿಲಿ ಸಹಿತ ಹಲವು‌ ಮಂದಿ ಕಾರ್ಯಕರ್ತರು‌ ಭಾಗವಹಿಸಿದ್ದಾರೆ.

ಸುಬ್ರಹ್ಮಣ್ಯದ ಅಭಯ ಮಹಾಗಣಪತಿ ಗುಡಿ , ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಬಳಿಕ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಚುನಾವಣಾ ಮಾಧ್ಯಮ ವಕ್ತಾರ ವೆಂಕಟ್ ದಂಬೆಕೋಡಿ, ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ. ತೀರ್ಥರಾಮ, ವೆಂಕಟ್ ವಳಲಂಬೆ, ಪೂವಾಜೆ ಕುಶಾಲಪ್ಪ ಗೌಡ, ವಿನಯ್ ಮುಳುಗಾಡು, ಮಂಡಲ ಸಮಿತಿ ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಬ್ರಹ್ಮಣ್ಯ ಬಿಜೆಪಿ
ಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ನಡುತೋಟ, ವಾಡ್ಯಪ್ಪ ಗೌಡ ಸೇರಿದಂತೆ ಸ್ಥಳೀಯ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.