ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಬಳಗದ ಜೊತೆಗೆ ನಾಯಕರ ಸಂಧಾನ ಸಭೆ

0

ಅಭ್ಯರ್ಥಿ ಆಯ್ಕೆ ಮತ್ತು ಆ ಬಳಿಕದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಇಂದು ಕಡಬದಲ್ಲಿ ನಂದಕುಮಾರ್ ಅಭಿಮಾನಿ ಬಳಗದ ಕೋರ್ ಕಮಿಟಿ ಸದಸ್ಯರೊಂದಿಗೆ ಎ ಐ ಸಿ ಸಿ ಸದಸ್ಯ, ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ಕೇಧಾರ್ ರವರು ಸಂಧಾನ ಸಭೆ ನಡೆಸಿದರು. ಸ್ವಾಭಿಮಾನಿ ಕಾಂಗ್ರೆಸ್ ಕಾರ್‍ಯಕರ್ತರು ಮತ್ತು ರಮಾನಾಥ ರೈ ಯವರ ಬಗ್ಗೆ ಅವಮಾನಕರ ಹೇಳಿಕೆಯಿಂದ ಕಾರ್ಯಕರ್ತರ ಸ್ವಾಭಿಮಾನಕ್ಕೆ ಹಾಗೂ ಭಾವನೆಗೆ ಧಕ್ಕೆಯಾಗಿದೆ. ಆದುದರಿಂದ ಈ ಹೇಳಿಕೆ ನೀಡಿದ ನಾಯಕರು ಕ್ಷಮೆ ಕೋರಬೇಕು. ನಂತರ ಸಾವಿರಾರು ಕಾರ್ಯಕರ್ತರು ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸಲು ತೀರ್ಮಾನಿಸಲಾಗುವುದು ಎಂದು ತಿಳಿಸಲಾಯಿತೆಂದು ತಿಳಿದುಬಂದಿದೆ. ಈ ಬಗ್ಗೆ ಸಮಾಲೋಚಿಸಿ ಸೂಕ್ತವಾಗಿ ಸಂಧಾನ ಮಾಡುವುದಾಗಿ ಅವರು ಭರವಸೆ ನೀಡಿದರೆಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ ಮತ್ತು ನಂದಕುಮಾರ್ ಅಭಿಮಾನಿ ಬಳಗದ ಮುಖಂಡರು ಉಪಸ್ಥಿತರಿದ್ದರು.