ಕೆಪಿಸಿಸಿ ಸಂಯೋಜಕರಾಗಿ ಎಸ್.ಸಂಶುದ್ದೀನ್ ನೇಮಕ

0

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಇವರನ್ನು ನೇಮಕಗೊಳಿಸಿ ಕೆಪಿಸಿಸಿ ಆದೇಶ ನೀಡಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸುಳ್ಯ ವಿಧಾನ ಸಭಾ ಕ್ಷೇತ್ರಚುನಾವಣೆ ಉಸ್ತುವಾರಿಯಾಗಿ ತೊಡಗಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಉಡುಪಿ ಹಾಗೂ ದ ಕ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಯಾಗಿರುವ ಎಸ್. ಸಂಶುದ್ದೀನ್ ರವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ,ರಾಜ್ಯ ಅಲ್ಪಸಂಖ್ಯಾತರ ವಿಭಾಗ ಕಾರ್ಯದರ್ಶಿಯಾಗಿ,ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ,ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯರಾಗಿ,ದ.ಕ.ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುತ್ತಾರೆ.