ಅರಂಬೂರು: ಪಯಸ್ವಿನಿ ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ

0

ಆಲೆಟ್ಟಿ‌ ಗ್ರಾಮದ ಅರಂಬೂರು ಎಂಬಲ್ಲಿ ವ್ಯಕ್ತಿಯೊಬ್ಬರು ಬೆಳಗ್ಗೆ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ್ದು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಎ.30 ರಂದು ವರದಿಯಾಗಿದೆ.

ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ರವರು ಮೃತ ಪಟ್ಟ ವ್ಯಕ್ತಿ.


ಬೆಳಿಗ್ಗೆ 6.00 ಗಂಟೆ ವೇಳೆಗೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ‌ ನದಿಗೆ ಹೋದವರು ಬಹಳ ಹೊತ್ತು ಕಳೆದರೂ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮತ್ತು ಸ್ಥಳೀಯರು ವಿಷಯ ತಿಳಿದು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಸಂಜೆ ವೇಳೆ ಅವರ ಮೃತ ದೇಹ ಮಜಿಗುಂಡಿ ಎಂಬಲ್ಲಿ ನದಿಯಲ್ಲಿ ತೇಲಿಕೊಂಡಿರುವುದು ಪಕ್ಕದ ಮನೆಯವರ ಗಮನಕ್ಕೆ ಬಂದಿದ್ದು ಸ್ಥಳೀಯ ಪಂಚಾಯತ್ ಸದಸ್ಯ ರತೀಶನ್ ಮತ್ತು ಸುದೇಶ್ ರವರು ಸುಳ್ಯ ಪೋಲಿಸರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಪೋಲಿಸರು ಆಗಮಿಸಿದ ಬಳಿಕ ಸುಳ್ಯ ವಲಯದ ವಿಪತ್ತು ನಿರ್ವಹಣಾ ಘಟಕದವರು ಹಾಗೂ ಸ್ಥಳೀಯರು ನದಿಗೆ ಇಳಿದು ಶವವನ್ನು ಮೇಲೆಕ್ಕೆತ್ತಲಾಯಿತು.


ಮೃತರು ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಅಸ್ವಸ್ಥರಾಗಿದ್ದರೆಂದು ತಿಳಿದು ಬಂದಿದೆ. ಮೃತರು ಪತ್ನಿ ಶ್ರೀಮತಿ ಗೀತಾ, ಸಹೋದರಿಯರಾದ ನಿವೃತ್ತ ಅಂಗನವಾಡಿ ಶಿಕ್ಷಕಿ ವಿಜಯಿ, ಶಿಕ್ಷಕಿ ಶಶಿಕಲಾ , ಸಹೋದರ ಸುರೇಶ್ ಕಾಂಞಂಗಾಡ್ ಹಾಗೂ ಕುಟುಂಬಸ್ಥರನ್ನು, ಬಂಧು ವಗದವರನ್ನು ಅಗಲಿದ್ದಾರೆ.
ಅಡ್ಕಾರ್, ಅರಂಬೂರು, ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
ಮೃತರು ಕಳೆದ 2020 ರಲ್ಲಿ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಿದ್ದರು.