ನಾಗಪಟ್ಟಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರಿಗೆ ಗಾಯ

0

ಸುಳ್ಯದಿಂದ ಆಲೆಟ್ಟಿ ಕಡೆಗೆ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಾಗಪಟ್ಟಣ ತಿರುವಿನಲ್ಲಿ ಇರುವ ಮೋರಿ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರು ಗಾಯಗೊಂಡರು. ತಕ್ಷಣ ಅವರಿಬ್ಬರನ್ನು ಸ್ಥಳೀಯ ಯುವಕರು ಪಿಕ್ ಅಪ್ ವಾಹನದಲ್ಲಿ ಸುಳ್ಯ ಕೆ.ವಿ.ಜಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ತಿಳಿದು ಬಂದಿದೆ.