ಹಾವೇರಿ: ಪಕ್ಷೇತರ ಅಭ್ಯರ್ಥಿ ಡಾ. ಯು.ಪಿ. ಶಿವಾನಂದರಿಂದ ಪತ್ರಿಕಾಗೋಷ್ಠಿ

0

ಸುದ್ದಿ ಜನಾಂದೋಲನದ ಲಂಚ ಭ್ರಷ್ಟಾಚಾರ ವಿರೋಧಿ ಆಂದೋಲನದ ಕುರಿತು ವಿವರಣೆ

ಸುದ್ದಿ ಸಮೂಹ ಮಾದ್ಯಮ ಸಂಸ್ಥೆಗಳ ಮಾಲಕರಾದ ಡಾ. ಯು.ಪಿ. ಶಿವಾನಂದರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪರ್ಧಿಸುತ್ತಿರುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪರ್ಧಿಸುತ್ತಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮೇ.2ರಂದು ಹಾವೇರಿ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.


ಸುದ್ದಿ ಜನಾಂದೋಲನ ವೇದಿಕೆಯ ವತಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತಾನು ಲಂಚ ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಜನರಿಗೆ ತಿಳಿಸುವ ಉದ್ಧೇಶದಿಂದ ಎಂದು ತಿಳಿಸಿದರು.
ಹಾವೇರಿ ಜಿಲ್ಲಾ ರೈತ ಸಂಘದ ಮಲ್ಲಿಕಾರ್ಜುನ , ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಬಸಪ್ಪ ಗೋವಿ, ಹಾವೇರಿ ಜಿಲ್ಲಾ ರೈತ ಘಟಕದ ಅಧ್ಯಕ್ಷ ಜೋಗೋರ್, ಸುದ್ದಿ ಬಳಗದ ಕೃಷ್ಣ ಬೆಟ್ಟ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.