ಸುಳ್ಯದಲ್ಲಿ ಬಜರಂಗದಳ ವಿರೋಧಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಪ್ರತಿಭಟನೆ

0

ಭಜರಂಗದಳದ ಶಕ್ತಿಯನ್ನು ಚುನಾವಣೆಯಲ್ಲಿ ತೋರಿಸುತ್ತೇವೆ; ಲತೀಶ್ ಗುಂಡ್ಯ

ಭಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಭಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಪ್ರತಿಭಟನೆ ಇಂದು ಖಾಸಗಿ ಬಸ್ ನಿಲ್ದಾಣದ ಬಳಿ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಭಜರಂಗದಳದ ಮುಖಂಡ ಲತೀಶ್ ಗುಂಡ್ಯ ಮಾತನಾಡಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಹೊರಡಿಸಿದ್ದಾರೆ. ಅಯೋದ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದಿಂದ ಹಿಡಿದು ದೇಶ ಕಟ್ಟುವ ಕಾರ್ಯಗಳನ್ನು ಕಾಂಗ್ರೆಸ್ ವಿರೋಧಿಸುತ್ತಾ ಬಂದಿದೆ. ಮೇ 10ರಂದು ನಡೆಯುವ ಚುನಾವಣೆಯಲ್ಲಿ ಭಜರಂಗದಳದ ಶಕ್ತಿಯನ್ನು ಕಾಂಗ್ರೆಸ್‌ಗೆ ತೋರಿಸುತ್ತೇವೆ ಎಂದು ಹೇಳಿದರು.


ಬಳಿಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಗೆ ಬೆಂಕಿ ಹಚ್ಚಿ ಸುಡಲಾಯಿತು.
ಪ್ರತಿಭಟನೆಯಲ್ಲಿ ಪ್ರಮುಖರಾದ ವರ್ಶಿತ್ ಚೊಕ್ಕಾಡಿ, ನವೀನ್, ಸನತ್,ದೇವಿಪ್ರಸಾದ್, ಅರವಿಂದ, ಹರಿಪ್ರಸಾದ್, ಪ್ರಮೋದ್, ಸತೀಶ್,‌ಪ್ರಶಾಂತ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.