ಜಾಲ್ಸೂರುನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಮತಯಾಚನೆ
ನಾನು ಸುಳ್ಯ ಕ್ಷೇತ್ರದ ಅಳಿಯ. ಇಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ನನಗೊಂದು ಅವಕಾಶ ನೀಡಿದೆ. ಈ ಬಾರಿ ನೀವೆಲ್ಲರೂ ನನಗೆ ಆಶೀರ್ವಾದ ಮಾಡಿ. ನಾನು ಸುಳ್ಯದ ಋಣ ತೀರಿಸುತ್ತೇನೆ” ಎಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದರು.
ಮೇ. 4 ರಂದು ರಾತ್ರಿ ಜಾಲ್ಸೂರು ಪೇಟೆಯಲ್ಲಿ ಮತಯಾಚನೆ ಸಂದರ್ಭ ನಡೆದ ಸಭೆಯಲ್ಲಿ ಮತದಾರರಲ್ಲಿ ಅವರು ವಿನಂತಿ ಮಾಡಿಕೊಂಡರು.
“ನಾನು ಸಾಮಾಜಿಕವಾಗಿ ಈಗಾಗಲೇ ತೊಡಗಿಸಿಕೊಂಡಿದ್ದೇನೆ. ಸುಳ್ಯ ಕ್ಷೇತ್ರದ ಸಮಸ್ಯೆಗಳನ್ನು ಅರಿತಿದ್ದೇನೆ. ಗೆದ್ದು ಸುಳ್ಯ ಕ್ಷೇತ್ರದ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮಾತನಾಡಿ ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಸುಳ್ಯದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಯನ್ನು ಗೆಲ್ಲಿಸೋಣ ಎಂದು ಹೇಳಿದರು.
ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಎಂ.ವೆಂಕಪ್ಪ ಗೌಡ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈಬಾರಿ ಬದಲಾವಣೆ ಅಗತ್ಯ. ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಯನ್ನು ಗೆಲ್ಲಿಸಿ ಎಂದು ಹೇಳಿದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೊಡಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯ ಕುರಿತು ಮಾತನಾಡಿದರು. ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್ ಮಾತನಾಡಿ ಅಭಿವೃದ್ಧಿ ಗಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು ಹೇಳಿದರು.
ಪ್ರಚಾರ ಸಭೆಯ ನಂತರ ಜಾಲ್ಸೂರು ಪೇಟೆಯಲ್ಲಿ ಜಿ.ಕೃಷ್ಣಪ್ಪರವರು ಕಾರ್ಯಕರ್ತರೊಂದಿಗೆ ಅಂಗಡಿ ಅಂಗಡಿಗಳಿಗೆ ತೆರಳಿ ಮತಯಾಚಿಸಿದರು.