ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೈಶಾಖ ಪೌರ್ಣಿಮಾ

0

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೈಶಾಖ ಪೌರ್ಣಿಮಾ ಪ್ರಯುಕ್ತ ವಿಶೇಷ ಕಾರ್ಯಕ್ರಮ ಇಂದು ನಡೆಯುತ್ತಿದೆ. ಬೆಳಿಗ್ಗೆ ದೇವರಲ್ಲಿ ಪ್ರಾರ್ಥನೆ, ಸಂಪ್ರೋಕ್ಷಣೆ, ಸಾನಿಧ್ಯ ಹವನ ನಡೆಯಿತು. ಪೂರ್ವಾಹ್ನ ನಾಗದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ ನಡೆಯಲಿದೆ. ಮಧ್ಯಾಹ್ನ ಉಭಯ ದೇವರಿಗೆ ಪೂಜೆ, ಪ್ರಸಾದ ವಿತರಣೆ ಬಳಿಕ ಭೂರಿಸಮಾರಾಧನೆ ಜರಗಲಿದೆ.


ರಾತ್ರಿ ಗಂಟೆ 8.00ರಿಂದ ಶ್ರೀ ವೆಂಕಟರಮಣ ದೇವರ ಪೇಟೆ ಸವಾರಿ, ಪಲ್ಲಕ್ಕಿ ಉತ್ಸವ, ವಸಂತೋತ್ಸವ, ಪ್ರಸಾದ ವಿತರಣೆ ಬಳಿಕ ರಾತ್ರಿ 12.00ಕ್ಕೆ ಬಲಿಪ್ರಸಾದ ವಿತರಣೆ ನಡೆಯಲಿದ್ದು,
ಭಗವದ್ಭಕ್ತರು ಆಗಮಿಸಿ ಶ್ರೀ ವೆಂಕಟರಮಣ ದೇವರ ಹಾಗೂ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ
ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ಮತ್ತು ಮೊಕ್ತೇಸರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.