ಕೇನ್ಯ ಬಳಿ ಸಂಭವಿಸಿದ ದುರ್ಘಟನೆ

0

ಹೊಳೆಯಲ್ಲಿ ಮುಳುಗಿ ನೀರು ಪಾಲಾದ ಸಹೋದರಿಯರು

ಒಬ್ಬಳ ಮೃತದೇಹ ಪತ್ತೆ

ಬಳ್ಪ ಸಮೀಪದ ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು ನೀರು ಪಾಲಾಗಿದ್ದು ಒಬ್ಬಾಕೆಯ ಮೃತದೇಹ ಪತ್ತೆಯಾಗಿದೆ.

ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾಗಿದ್ದು ಈ ಪೈಕಿ ಹಂಸಿತಾಳ ಮೃತದೇಹ ಪತ್ತೆಯಾಗಿದೆ.

ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ಒಬ್ಬಾಕೆಯ ಮೃತದೇಹ ಪತ್ತೆಯಾಯಿತು. ಕಾರ್ಯಾಚರಣೆ ಮುಂದುವರಿದಿದೆ.ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ.

ಸತೀಶ್ ಅಮ್ಮಣ್ಣಾಯ ಅವರ ಮನೆಯಲ್ಲಿ ನಾಳೆ ನಡೆಯುವ ಕಾರ್ಯಕ್ರಮವೊಂದರ ನಿಮಿತ್ತ ಈ ಮಕ್ಕಳು ತಾಯಿಯೊಂದಿಗೆ ಇಂದು ಬೆಂಗಳೂರಿನಿಂದ ಆಗಮಿಸಿದ್ದರು.

ಸಂಜೆ ವೇಳೆ ಸಹೋದರಿಯರು ಸ್ನಾನಕ್ಕೆಂದು ಹೊಳೆಗೆ ಹೋಗಿದ್ದರು. ಈ ವೇಳೆ ಒಬ್ಬಾಕೆ ನೀರಿನ ಸೆಳೆತಕ್ಕೆ ಸಿಲುಕಿದಾಗ ಮತ್ತೊಬ್ಬಾಕೆ ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿರಬಹುದೆಂದು ಶಂಕಿಸಲಾಗಿದೆ.