ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ : E -KYC ಮಾಡಲು ಸೂಚನೆ

0

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆದ ಫಲಾನುಭವಿಗಳಿಗೆ E-KYC ಮಾಡಲು ಕಡ್ಡಾಯವಾಗಿರುತ್ತದೆ. E-KYC ಮಾಡಲು ರೈತರು ನಾಗರಿಕಾ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೋರ್ಟಲ್‌ನ ಪಾರ್ಮಸ್್ರ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ದಾಖಲಿಸಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು ಸೂಚಿಸಿದ್ದು ಇ-ಕೆವೈಸಿ ಮಾಡದೇ ಇರುವ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಸುಳ್ಯ ತಾಲೂಕಿನ 4208 ರೈತ ಫಲಾನುಭವಿಗಳು E-KYC ಮಾಡಲು ಬಾಕಿ ಇರುತ್ತಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯುತ್ತಿದ್ದ ಫಲಾನುಭವಿಯು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರ ಮತ್ತು ಆಧಾರ್ ಪ್ರತಿಯನ್ನು ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಸುಳ್ಯ ಇಲ್ಲಿಗೆ ತಲುಪಿಸಬೇಕಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here