ಪ್ರಣವ ಸೌಹಾರ್ದ ಸಹಕಾರಿ ಸಂಘದ ಮೈಸೂರು ಶಾಖೆ ಉದ್ಘಾಟನೆ

0

ಮಂಗಳೂರಿನ ಯೆಯ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘದ 7 ನೇ ಶಾಖೆ ಮೈಸೂರಿನ ಶ್ರೀರಾಮಪುರದಲ್ಲಿ ಮೇ.21 ರಂದು ಉದ್ಘಾಟನೆಗೊಂಡಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜೀ ಯವರು ನೂತನ ಶಾಖೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರಣವ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಜಿ.ಆರ್.ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹಲವು ಗಣ್ಯರು ಉಪಸ್ಥಿತರಿದ್ದರು. ಶ್ರೀಮತಿ ಶ್ವೇತಾ ಕಾಮತ್ ಮತ್ತು ಶ್ರೀಮತಿ ಜಯಲಕ್ಷ್ಮಿ ಚಂದ್ರಹಾಸ ಪ್ರಾರ್ಥಿಸಿದರು. ಮಧುಸೂದನ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಮೊದಲು ಅರೆಹೊಳೆ ಪ್ರತಿಷ್ಠಾನ ಮಂಗಳೂರು ಇದರ ನಂದಗೋಕುಲ ಕಲಾವಿದರಿಂದ ಕು.ಶ್ವೇತಾ ಅರೆಹೊಳೆ ನಿರ್ದೇಶನದಲ್ಲಿ ಗಾನ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಹಕಾರಿ ಸಂಘದ ನಿರ್ದೇಶಕರು, ಮೈಸೂರು ಶಾಖಾ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಸ್ಥೆಯಲ್ಲಿ ಬೆಳಗ್ಗೆ ಗಣಹೋಮ ನಡೆಯಿತು.