ಮುರಾರಿ ಕಡಪಳ ನಿಧನ

0

ಅಮರಮುಡ್ನೂರು ಗ್ರಾಮದ ಪೈಲಾರು ನಿವಾಸಿ ಮುರಾರಿ ಕಡಪಳ ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ.23 ರಂದು ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.
ಅವರು ತೋಟದಲ್ಲಿ ಕೊಕೊ ಕೊಯ್ಯುತ್ತಿರುವ ವೇಳೆಯಲ್ಲಿ ಮರದಿಂದ ಆಯ ತಪ್ಪಿ ಕೆಳಗೆ ಬಿದ್ದರು. ಅವರನ್ನು ತಕ್ಷಣ ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ
ಕರೆತಂದು ದಾಖಲಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರ ಸಲಹೆಯಂತೆ ಅವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿನ ಯೇನೆಪೋಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಿದ್ದು ಗಾಯಗೊಂಡು ಅಧಿಕ ರಕ್ತಸ್ರಾವದ ಕಾರಣ ದಿಂದ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮೃತರು ಪತ್ನಿ ಶ್ರೀಮತಿ ವಾರಿಜಾ, ಓರ್ವ ಪುತ್ರ ಮನೀಷ್, ಓರ್ವ ಪುತ್ರಿ ಹಸ್ತಾ ಹಾಗೂ ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಪ್ರಗತಿಪರ ಕೃಷಿಕರು ಹಾಗೂ
ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here