ಮೇ.‌26,27 : ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ‌ ಹೋಮ, ನಾಗದೇವರ‌ ಪ್ರತಿಷ್ಠಾ ವಾರ್ಷಿಕೋತ್ಸವ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿಯಾಗಿ 8.00ರಿಂದ ಕುನ್ನತ್ತಿಲ್ ಶ್ರೀ ಮುರಳೀಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಮೇ. 26ರಂದು ಬೆಳಿಗ್ಗೆ ಗಂಟೆ 8.00ರಿಂದ ಚಂಡಿಕಾ ಹೋಮ ನಡೆಯಲಿದೆ. ಸಂಜೆ 6.30ರಿಂದ‌ ಶ್ರೀ ದುರ್ಗಾಂಬಿಕಾ‌ ಭಜನಾ ಕೊಣಾಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.


ಮೇ. 27ರಂದು ಶ್ರೀ ಕ್ಷೇತ್ರದ ನಾಗಸನ್ನಿಧಿಯಲ್ಲಿ ಶ್ರೀ ನಾಗಬ್ರಹ್ಮ, ನಾಗರಾಜ, ನಾಗಕನ್ನಿಕೆಯರ ಚಿತ್ರಕೂಟ ಸಹಿತ ನಾಗದೇವರ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಬೆಳಿಗ್ಗೆ 8.00ರಿಂದ ಹಾಲು, ಸಿಯಾಳ ಅಭಿಷೇಕ ಮತ್ತು ತಂಬಿಲ ಸೇವೆ ಸಂಜೆ 6.00ರಿಂದ ಆಶ್ಲೇಷ ಬಲಿಪೂಜೆ ನಡೆಯಲಿದೆ.

ನಾಗತಂಬಿಲ‌ ಸೇವೆ ಮಾಡಿಸುವವರು ರೂ. 150/- ನ್ನು ಪಾವತಿಸಿ ಪೂಜಾ ಕಾರ್ಯದಲ್ಲಿ ಭಾಗವಹಿಸಬಹುದು. ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಪಿ. ಉಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.