ಕೊಡಿಯಾಲ ಗ್ರಾ.ಪಂ.ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ

0

ಕೊಡಿಯಾಲ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ 8ನೇ ದಿನವಾದ ಮೇ.27 ರಂದು ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ನಡೆಸಲಾಯಿತು.

ಈ ಸಮಾರೋಪ ಸಮಾರಂಭಕ್ಕೆ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ರವರು ಉಪಸ್ಥಿತರಿದ್ದರು. ಮಕ್ಕಳು ವರದಿ ಮಂಡಿಸಿ ನಂತರ ತಮ್ಮ ಅನಿಸಿಕೆಯನ್ನು ಹೇಳಿದರು. ಶಿಬಿರಕ್ಕೆ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರವನ್ನು ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ನೀಡಿದರು.

ರಾಷ್ಟ್ರ ಗೀತೆ ಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು. ಲಘು ಉಪಹಾರದ ವ್ಯವಸ್ಥೆಯನ್ನು ಗ್ರಾಮ ಪಂಚಾಯತು ವತಿಯಿಂದ ನೀಡಲಾಯಿತು. ಮತ್ತು ಸಂಜೀವಿನಿ ಸಂಘದ ಎಂಬಿಕೆ ಯಶೋಧ, ಗ್ರಂಥಾಲಯ ಮೇಲ್ವಿಚಾರಿಕಿ ಉಮಾವತಿ ಹಾಗೂ ಗ್ರಾಮ ಪಂಚಾಯತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here