ಮುರುಳ್ಯ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

0

ಮುರುಳ್ಯ ಗ್ರಾಮದ ಸಮಹಾದೀ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಜೂನ್ ೩ರಂದು ವೇದಮೂರ್ತಿ ಪ್ರಶಾಂತ್ ಪರ್ಲತ್ತಾಯರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.


ಬೆಳಿಗ್ಗೆ ಗಣಹೋಮ, ಸಂಜೆ ವಿವಿಧ ಭಜನಾ ತಂಡಗಳಿಂದ ಶ್ರೀ ರಾಮನಾಮ ತಾರಕ ಮಂತ್ರ, ಸಂಜೆ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾ ಪೂಜೆ, ಸಂಕಲ್ಪ ಮತ್ತು ಪೂಜಾರಂಭ ನಡೆಯಿತು. ನಂತರ ಮಂಗಳಾರತಿ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.


ಮಂದಿರದ ಸಂಚಾಲಕ ವಸಂತ ನಡುಬೈಲು ಮತ್ತು ಪದಾಧಿಕಾರಿಗಳು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.