ಕಲ್ಲಪಳ್ಳಿ: ಪೆರಿಯಾರ್ ಎಂಬಲ್ಲಿ ಮನೆಯ ಮೇಲೆ ಮಗುಚಿದ ಟ್ಯಾಂಕರ್ – ಬಸ್ಸು ಬಿದ್ದ ಸ್ಥಳದಲ್ಲಿ ಮತ್ತೊಂದು ದುರ್ಘಟನೆ

0

ಬಡ್ಡಡ್ಕ ಕಲ್ಲಪಳ್ಳಿ ಮಾರ್ಗವಾಗಿ ಕೇರಳದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ಪೆರಿಯಾರ್ ಎಂಬಲ್ಲಿ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಇದ್ದ ಮನೆಯ ಮೇಲೆ ಮಗುಚಿ ಬಿದ್ದಿದೆ.


ಪೆಟ್ರೋಲ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ನಲ್ಲಿ ಒಟ್ಟು 3 ಮಂದಿ ಇದ್ದು ಈಗಾಗಲೇ ಸ್ಥಳೀಯರ ಕಾರ್ಯಾಚರಣೆಯಲ್ಲಿ 3 ಮಂದಿ ಸಿಕ್ಕಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.


ಕಳೆದ ಎರಡು ವರ್ಷದ ಹಿಂದೆ ಇದೇ ಸ್ಥಳದ ಸಮೀಪವೇ ಬಸ್ಸು ಮಗುಚಿ 6 ಮಂದಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಕಳೆದ ವರ್ಷ ಮರದ ಲಾರಿ ಮಗುಚಿ ನಾಲ್ಕು ಮಂದಿ ಮೃತಪಟ್ಟಿದ್ದರು. ಇದೀಗ ಮತ್ತೆ ಅದೇ ಸ್ಥಳದಲ್ಲಿ ಅನಾಹುತ ಸಂಭವಿಸಿದೆ. ಟ್ಯಾಂಕರ್ ಬಿದ್ದ ಪರಿಣಾಮವಾಗಿ ಮನೆಯು ಸಂಪೂರ್ಣ ಹಾನಿಯಾಗಿದೆ.


ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.