ಬೈತಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈಚರ್ ಲಾರಿ ಪಲ್ಟಿ- ಅಪಾಯದಿಂದ ಪಾರು

0

ಚಾಲಕನ ನಿಯಂತ್ರಣ ತಪ್ಪಿ ಈಚರ್ ಲಾರಿಯೊಂದು ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಜೂ.16ರಂದು ರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ ಮೈಸೂರಿಗೆ ಜೆ.ಜೆ.ಎಂ. ಯೋಜನೆಯ ನೀರು ಸರಬರಾಜು ಮಾಡುವ ಪೈಪ್ ಹೇರಿಕೊಂಡು ಬರುತ್ತಿದ್ದ ಈಚರ್ ಲಾರಿ ಅಡ್ಕಾರು ಸುಬ್ರಹ್ಮಣ್ಯ ದೇವಸ್ಥಾನದ ದ್ವಾರ ದಾಟಿ ಬೈತಡ್ಕ ತಿರುವಿನ ಇಳಿಜಾರಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಯಿತು. ಅದೃಷ್ಟವಶಾತ್ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಲಾರಿಯನ್ನು ಕ್ರೈನ್ ಬಳಸಿ ತೆರವುಗೊಳಿಸಲಾಯಿತೆಂದು ತಿಳಿದುಬಂದಿದೆ.