ಮಸೂದ್ ತಾಯಿಗೆ ಸರಕಾರದಿಂದ ರೂ. 25 ಲಕ್ಷ ಹಸ್ತಾಂತರ

0


ಸುಳ್ಯ ತಾಲೂಕಿನ ಕಳಂಜದಲ್ಲಿ ಜುಲೈ 19 2022 ರಂದು ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಮಸೂದ್ ಕುಟುಂಬದವರಿಗೆ ರಾಜ್ಯ ಸರಕಾರದ ವತಿಯಿಂದ ರೂ. ೨೫ ಲಕ್ಷ ಪರಿಹಾರಧನವನ್ನು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಸ್ತಾಂತರಿಸಿದರು.

ಮಸೂದ್ ತಾಯಿ ಸಾರಮ್ಮ ಪರಿಹಾರದ ಚೆಕ್ ಪಡೆದುಕೊಂಡರು. ಸಹೋದರ ಸಂಬಂಧಿ ಹೈದರ್ ಕಳಂಜ, ಸುಳ್ಯದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಪುತ್ತೂರು ಶಾಸಕ ಅಶೋಕ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್, ನಾಯಕರುಗಳಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಕೆ.ಎಂ. ಮುಸ್ತಫಾ, ಅಬ್ದುಲ್ ಗಫೂರ್ ಕಲ್ಮಡ್ಕ, ಇಸ್ಮಾಯಿಲ್ ಪಡ್ಪಿನಂಗಡಿ, ಸತೀಶ್ ಕೂಜುಗೋಡು, ಜಗದೀಶ್ ಪಡ್ಪು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.