ಅಮರಪಡ್ನೂರು : ವಿಶ್ವ ತಂಬಾಕು ವಿರೋಧಿ ದಿನಾಚರಣೆ

0


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಇದರ ಆಶ್ರಯದಲ್ಲಿ ದೊಡ್ಡತೋಟ ವಲಯದ ಅಮರಪಡ್ನೂರು ಒಕ್ಕೂಟದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜೂ.೧೮ರಂದು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವಅಧ್ಯಕ್ಷ ವಿಶ್ವನಾಥ ರೈ ಕಳಂಜ ನೆರವೇರಿಸಿದರು. ವಿಶ್ವ ತಂಬಾಕು ವಿರೋಧಿ ದಿನಾಚರಣೆ ಬಗ್ಗೆ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೀಣಾ ಪಡ್ಪು, ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ವಲಯದ ಮೇಲ್ವಿಚಾರಕರಾದ ಕೃಷ್ಣಪ್ಪ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಹರ್ಷಿತ ಹಾಗೂ ಪದಾಧಿಕಾರಿಗಳ ಉಪಸ್ಥಿತರಿದ್ದರು.


ಒಕ್ಕೂಟದ ಸರ್ವ ಸದಸ್ಯರು ಭಾಗವಹಿಸಿದ್ದರು. ಧನ್ಯವಾದವನ್ನು ಶ್ರೀಮತಿ ಯಶಕಲ ನೆರವೇರಿಸಿದರು.