ದೇವರಕೊಲ್ಲಿಯ ಅಪಘಾತ ಪ್ರಕರಣ : ಓರ್ವ ಗಾಯಾಳು ಮೃತ್ಯು

0

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪ ದೇವರಕೊಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ಕಾರಿಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ವರದಿಯಾಗಿದೆ.

ಬೆಂಗಳೂರು ಮೂಲದ ರವಿ ಮೃತಪಟ್ಟ ವ್ಯಕ್ತಿ. ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.