ರೈಲ್ವೆ ಹಳಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

0

ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನೆಟ್ಟಣ ಸಮೀಪ ಸಂಭವಿಸಿದೆ. ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.


ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ ನೆಟ್ಟಣದಲ್ಲಿ ರೈಲ್ವೆ ಹಳಿಗೆ ತಲೆ ಕೊಟ್ಟು ಜೂ.೨೧ ರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಲು ಕಾರಣ ತಿಳಿದು ಬಂದಿಲ್ಲ. ಅವರಿಗೆ ೪೫ ವರ್ಷ ವಯಸ್ಸಾಗಿತ್ತು. ಎಲಿಮಲೆ ರಬ್ಬರ್ ಪ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು. ಮೃತರು ಪತ್ನಿ ಲಾವಣ್ಯ, ಮಕ್ಕಳಾದ ನಿಹಾಲ್, ಶ್ರೇಯಾ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.