ಉಬರಡ್ಕದ ಬೆಳ್ರಂಪಾಡಿಯಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಯುವಕ ಸಾವು

0

ಉಬರಡ್ಕ ಗ್ರಾಮದ ಬೆಳ್ರಂಪಾಡಿ‌ ಗುಡ್ಡದಲ್ಲಿ ಕೋವಿಯಿಂದ ಗುಂಡು‌ ಹೊಡೆದುಕೊಂಡು ಯುವಕ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.

ಸಾವಿಗೀಡಾಗಿರುವ ಯುವಕ ಅರಂತೋಡು ಗ್ರಾಮದ ರವಿ ಎಂದು‌ ತಿಳಿದುಬಂದಿದೆ.

ಈತ ಬೆಳ್ರಂಪಾಡಿಯ ಮನೆಯೊಂದರಲ್ಲಿ ಸ್ವಲ್ಪ‌ ಸಮಯದಿಂದ ಕೆಲಸಕ್ಕಿದ್ದು ಕುಡಿತದ ಚಟ ಹೊಂದಿದ್ದರೆನ್ನಲಾಗಿದೆ.

ನಿನ್ನೆ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ‌ ತಲೆಗೆ ಗುಂಡು ಹೊಡೆದು ಸಾವನ್ನಪ್ಪಿದರೆಂದು ತಿಳಿದುಬಂದಿದೆ. ಅತ್ಮಹತ್ಯೆ ಆಗಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ‌ ರಾತ್ರಿಯೇ ಪೋಲೀಸರು ‌ಬಂದು‌ ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.