ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ

0

ಅಧ್ಯಕ್ಷರಾಗಿ ವಸಂತ ಕುಮಾರ್ ,ಉಪಾಧ್ಯಕ್ಷರಾಗಿ ಜಯಂತ ಬಿ.ಅವಿರೋಧ ಆಯ್ಕೆ

ಐವರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಕುಮಾರ್ ನಾಟಿಕೇರಿ ಉಪಾಧ್ಯಕ್ಷರಾಗಿ ಜಯಂತ ಗೌಡ ಬೋಳುಗುಡ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿಯ 13 ಮಂದಿ ನಿರ್ದೇಶಕರ ಸ್ಥಾನಕ್ಕೆ 11 ಮಂದಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಸಿದ್ದ ಎಲ್ಲರೂ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದರು.

ಅಧ್ಯಕ್ಷ,ಉಪಾಧ್ಯಕ್ಷ ಆಯ್ಕೆಯ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀನಿವಾಸ ಮಡ್ತಿಲ, ಕೇಶವ ಗೌಡ, ದಯಾನಂದ ಚೆಮ್ನೂರು,ಪೊನ್ನಪ್ಪ ಪಿ, ಚಿದಾನಂದ, ನಾಗಪ್ಪ ಪಾಲೆಪ್ಪಾಡಿ, ಶ್ರೀಮತಿ ಮಮತ ಮಡ್ತಿಲ, ಶ್ರೀಮತಿ ರೇವತಿ ಬೋಳುಗುಡ್ಡೆ, ರವಿಕಲಾ ಎನ್.ರವರು ಉಪಸ್ಥಿತರಿದ್ದರು.


ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ.ರವರು ಚುನಾವಣಾಧಿಕಾರಿಯಾಗಿದ್ದರು. ಸಂಘದ ಕಾರ್ಯದರ್ಶಿ ಹಿರಿಯಣ್ಣ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.