ಅರಂಬೂರು : ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ಸುಳ್ಯ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯದ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಅರಂಬೂರು ಒಕ್ಕೂಟದಲ್ಲಿ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರುಂಬೂರು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ್ ನೆಡ್ಚಿಲುರವರು ವಹಿಸಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷರಾದ ಲೋಕನಾಥ್ ಅಮೆಚೂರುರವರು ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದ್ದರಿಂದ ಯಾವ ರೀತಿ ನಾವು &ಸಮಾಜವನ್ನು ಕಾಪಾಡಿಕೊಳ್ಳಬೇಕೆಂಬುದರ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರು ಜಯಶ್ರೀ, ಸೇವಾಪ್ರತಿನಿಧಿ ವಿಜಯಶ್ರೀ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.