ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ತುರ್ತು ಸಮಸ್ಯೆಗಳಿಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಿಂದ ಮುಖ್ಯಾಧಿಕಾರಿಗೆ ಮನವಿ

0

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟಿನ್ ನಿರ್ವಹಣೆ, ಬೀದಿ ದೀಪ ಸಮಸ್ಯೆ ಕುಡಿಯುವ ನೀರಿನ ಪೈಪ್ ಲೈನ್ ಸಮಸ್ಯೆ, ಕೇರ್ಪಳದ ಹಿಂದೂ ರುಧ್ರಭೂಮಿ ನಿರ್ವಹಣೆ, ಪುರಭವನ ನಿರ್ವಹಣೆ, ಸಾರ್ವಜನಿಕ ಶೌಚಾಲಯ ಶುಚಿತ್ವ, ಮಳೆಗಾಲದ ಚರಂಡಿ ಸ್ವಚ್ಛತೆ ಸೇರಿದಂತೆ ತುರ್ತು ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮನವಿ ನೀಡಲಾಯಿತು.

ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಭವಾನಿಶಂಕರ್ ಕಲ್ಮಡ್ಕ, ಇಬ್ರಾಹಿಂ ಶಿಲ್ಪಾ, ಶಹೀದ್ ಪಾರೆ ಉಪಸ್ಥಿತರಿದ್ದರು.