ಭೂ ವಿವಾದಕ್ಕೆ ಸಹೋದರ ಬಲಿ

0

ಉಸ್ಮಾನ್ ರನ್ನು ಕೊಂದ ಸಹೋದರರು

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ವರದಿಯಾಗಿದೆ.


ಸತ್ತಾರ್, ರಫೀಕ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.


ಸಂಪಾಜೆ ಪೋಲೀಸರು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ವಿವರ ಇನ್ನಷ್ಟೆ ಲಭಿಸಬೇಕಾಗಿದೆ.