ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಹಬ್ಬ

0

ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಸಾಂಸ್ಕೃತಿಕ ದಿನವನ್ನು ಜು. ೧೪ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ ಬಿ. ವಹಿಸಿದ್ದರು. ಮುಖ್ಯ ಅತಿಥಿಯಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಸ್ಥಾತಕ್ನೋತ್ತರ ವಿಭಾಗದ ಮುಖ್ಯಸ್ಥೆ ಪ್ರೋ. ರಮ್ಯ ಎಸ್.ಕೆ.ರವರು ಮಾತನಾಡಿ ಎಲ್ಲರೂ ಶಿಸ್ತು ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು. ವೇದಿಕೆಯಲ್ಲಿ ವಿಧ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಂಜಲಿ ಎ.ಜೆ ಮತ್ತು ಕವನ.ಬಿ ಪ್ರಾರ್ಥಿಸಿದರು, ಮಿಲನ್ ಬಿ.ಕೆ ಸ್ವಾಗತಿಸಿ, ಮಿಥುನ್ ಪ್ರಕಾಶ್ ವಂದಿಸಿದರು. ಶಿಲ್ಪಾ. ಬಿ, ಮತ್ತು ಕೀರ್ತನಾ. ಸಿ ಕಾರ್ಯಕ್ರಮವನ್ನು ನಿರೂಪಿಸಿದರು.