ಕನಕಮಜಲು: ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು

0

ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಅವರ ಮನೆಯಲ್ಲಿ ಕಳ್ಳತನ

ರಾತ್ರಿ ವೇಳೆ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ಜು.16ರಂದು ರಾತ್ರಿ ಸಂಭವಿಸಿದೆ.

ಯುರೇಶ್ ಬುಡ್ಲೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರ ಕುಟುಂಬ ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದ , ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ ಕಳ್ಳರು ಮನೆಯೊಳಗೆ ಜಾಲಾಡಿ, ಅಂದಾಜು ಮೂವತ್ತು ಪವನ್ ಗೂ ಅಧಿಕ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.
ಯುರೇಶ್ ಬುಡ್ಲೆಗುತ್ತು ಅವರ ಚಿನ್ನ , ಪತ್ನಿ, ಮಗಳು ಹಾಗೂ ಸೊಸೆಯ ಚಿನ್ನಾಭರಣ ಕಳವಾಗಿದ್ದು, ಸುಳ್ಯ ಪೊಲೀಸರಿಗೆ ರಾತ್ರಿಯೇ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.