ಅಜ್ಜಾವರ ಮೇನಾಲ ಶಾಲಾ ಶಿಕ್ಷಕಿ ಶ್ರೀಮತಿ ಮಮತಾರಿಗೆ ಬೀಳ್ಕೊಡುಗೆ

0

ಅಜ್ಜಾವರ ಮೇನಾಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿಯಾಗಿ 12 ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಈದೀಗ ವರ್ಗಾವಣೆಗೊಂಡಿರುವ ಶ್ರೀಮತಿ ಮಮತಾರವರಿಗೆ ಬೀಳ್ಕೊಡುಗೆ ಸಮಾರಂಭ ಜು.20ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಮಮತಾ ರವರನ್ನು ಶಾಲಾ ಎಸ್‌ಡಿಎಂಸಿ ಮತ್ತು ಪೋಷಕರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಸೌಕತ್ ಅಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಮುಖಂಡರು ಮತ್ತು ಶಿಕ್ಷಕರು ಮಾತನಾಡಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮೇನಾಲ ಕಾಳಿಕಾ ದುರ್ಗಾಪರಮೇಶ್ವರಿ ಕ್ಷೇತ್ರದ ಪದ್ಮನಾಭ ಸ್ವಾಮಿ, ಗ್ರಾ. ಪಂ. ಸದಸ್ಯ ಪ್ರಸಾದ್ ರೈ ಮೇನಾಲ, ಹಿ.ವಿ ಸಂಘದ ಅಧ್ಯಕ್ಷ ರಾಮಚಂದ್ರ ಪಲ್ಲತಡ್ಕ, ಸ್ಥಳೀಯ ಮುಖಂಡರುಗಳಾದ ಸುಭೋದ್ ಶೆಟ್ಟಿ ಮೇನಲಾ, ವಿಷ್ಣು ಯುವಕ ಮಂಡಳದ ಅಧ್ಯಕ್ಷ ರಂಜಿತ್ ರೈ ಮೇನಾಲ,ಮಹೇಶ್ ರೈ ಮೇನಾಲ, ಮುಖ್ಯ ಶಿಕ್ಷಕಿ ಶ್ರೀಮತಿ ಕನಕ, ಸಹ ಶಿಕ್ಷಕ ಚಂದ್ರಶೇಖರ. ವಿ, ಶಿಕ್ಷಕಿ ಪೂರ್ಣಿಮ.ಜೆ ಮತ್ತು ಅತಿಥಿ ಶಿಕ್ಷಕಿ ಶ್ರೀಮತಿ ಉಷಾ, ಶಾಲಾ ಅಡುಗೆ ಸಿಬ್ಬಂದಿಯರು, ಎಸ್. ಡಿ.ಎಂ. ಸಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಆರೋಗ್ಯ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ, ಪೋಷಕರು, ಊರ ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು ಉಪಸಿತರಿದ್ದರು.