ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಸ್ಥಾಪನಾ ದಿನಾಚರಣೆ

0

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ) ಬಿ ಯಂ ಯಸ್ ಸಂಯೋಜಿತ ವತಿಯಿಂದ ಬಿ ಯಂ ಯಸ್ ಸ್ಥಾಪಕ ದಿನಾಚರಣೆ ಕಾರ್ಯಕ್ರಮವನ್ನು ಹಳೆಗೇಟಿನ ಸಂಘದ ಕಟ್ಟಡ ಕಾರ್ಮಿಕರ ತಿಲಕಭವನದಲ್ಲಿ ಜು.23 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ದೀಪ ಬೆಳಗಿಸಿ ಮಾತನಾಡಿದರು.

ಅಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಅದ್ಯಕ್ಷತೆ ವಹಿಸಿದ್ದರು, ಕರ್ನಾಟಕ ಇಂಡಸ್ಟ್ರಿಯಲ್ ಸ್ಟಾಫ್ ಯೂನಿಯನ್ ಅಧ್ಯಕ್ಷರಾದ ಪಿ ಭಾಸ್ಕರ್ ರಾವ್, ಪ್ರಧಾನಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಕೋಶಾಧಿಕಾರಿ ನಿತ್ಯಾನಂದ ಆರಂಬೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಿ. ಭಾಸ್ಕರ್ ರಾವ್ ರವರು ಬಿ. ಯಂ. ಯಸ್ ಸಂಘದ ಸ್ಥಾಪನೆಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು, ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳುವಳಿಕೆಯನ್ನು ಹೇಳಿದರು. ಅಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕರು ಸ್ಥಾಪನಾ ದಿನಾಚರಣೆಯ ಅಂಗವಾಗಿ ಮಾತನಾಡಿದರು.ನಾಗರಾಜ್ ಮುಳ್ಯ ಪ್ರಾರ್ಥನೆಯನ್ನು ಮಾಡಿದರು.

ಸುರೇಂದ್ರ ಕಾಮತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಚಂದ್ರಶೇಖರ ಮರ್ಕಂಜ ಧನ್ಯವಾದ ಸಮರ್ಪಿಸಿದರು. ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಲಾಯಿತು. ನಮ್ಮ ಸಂಘದ ಸದಸ್ಯರು ಹಾಗೂ ಕ್ಯಾಂಪ್ಕೋ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.