ಕುಮಾರಧಾರ ಸ್ನಾನಘಟ್ಟಕ್ಕೆ ಇಳಿಯದಂತೆ ಕಡಬ ತಹಶಿಲ್ದಾರ್ ಸೂಚನೆ

0

ಕಡಬ ತಾಲೂಕಿನಾದ್ಯಂತ ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಸುಬ್ರಹ್ಮಣ್ಯ ಗ್ರಾಮದ ಸುಬ್ರಹ್ಮಣ್ಯ ಸ್ನಾನಘಟ್ಟದಲ್ಲಿ ಕುಮಾರಧಾರ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಆದ್ದರಿಂದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗಳು ಬಂದು ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಉದ್ದೇಶಕ್ಕೆ ಇಳಿಯುತ್ತಿದ್ದಾರೆ.

ಅದ್ದರಿಂದ ಮುಂದೆ ಸಂಭವಿಸಬಹುದಾದಂತಹ ಅನಾಹುತಗಳನ್ನು ತಪ್ಪಿಸುವ ಹಿತದೃಷ್ಟಿಯಿಂದ ಸ್ನಾನಘಟ್ಟದ ಬಳಿ ತೆರಳದಂತೆ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ಸೂಚಿಸಲಾಗಿದೆ ಎಂದು ಕಡಬ ತಹಶಿಲ್ದಾರ್ ರಮೇಶ್ ಬಾಬು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.