ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸಚಿವ ಮಹಮ್ಮದ್ ದೇವರಕೋವಿಲ್ ರವರಿಗೆ ಸನ್ಮಾನ

0

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ ಕೇರಳ ರಾಜ್ಯ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರಕೋವಿಲ್ ರವರನ್ನು ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯಸ್ಮರಣೆ ಸಮಾರಂಭದಂದು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಾಹಿದ್ ತೆಕ್ಕಿಲ್ ಶಾಲು ಹೊದಿಸಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ. ಶ್ಯಾಮ್ ಭಟ್ , ಸಂಪಾಜೆ ಚರ್ಚ್ ನ ಧರ್ಮ ಗುರುಗಳು ಫಾ. ಪೌಲ್ ಕ್ರಾಸ್ತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸಂಪಾಜೆ ಗ್ರಾಂ.ಪಂ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ನಿವೃತ್ತ ಪ್ರಾಂಶುಪಾಲ ಜಿ.ಉಮ್ಮರ್, ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ, ಗಾಂಧಿನಗರ ಜುಮಾ ಮಸೀದಿ ಅಧ್ಯಕ್ಷ ಕೆ.ಎಂ ಮುಸ್ತಫ , ಇಸಾಕ್ ಸಾಹೇಬ್ ಪಾಜಪಳ್ಳ, ಸದಾನಂದ ಮಾವಾಜಿ, ಕೆ.ಟಿ.ವಿಶ್ವನಾಥ, ಶರೀಫ್ ಕಂಠಿ, ಮೂಸಾ ಪೈ೦ಬಚ್ಚಾಲ್ , ಅಬ್ದುಲ್ ರೆಹಮಾನ್ ಮೊಗರ್ಪಣೆ, , ಉನೈಸ್ ಪೆರಾಜೆತೆಕ್ಕಿಲ್ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಬಿ.ಎಫ್, ದಾಮೋದರ್ ಮಾಸ್ತರ್, ಜಗದೀಶ್ ರೈ, ಉಧ್ಯಮಿ ಸಮದ್, ಮೊಯಿದೀನ್, ಮೂಸಾನ್ ಹಾಜಿ ತೆಕ್ಕಿಲ್, ಟಿ.ಎಂ ಶಮೀರ್ ತೆಕ್ಕಿಲ್, ಟಿ.ಎಂ ಜಾವೇದ್ ತೆಕ್ಕಿಲ್, ಟಿ.ಎಂ ಶಾಝ್ ತೆಕ್ಕಿಲ್, ಸದಾನಂದ ಮಾವಾಜಿ, ಕೆ.ಟಿ.ವಿಶ್ವನಾಥ, ಸಿದ್ದಿಕ್ ಕೊಕ್ಕೊ ಮೊದಲಾದವರಿದ್ದರು.