ವಿರಾಜಪೇಟೆ ಶಾಸಕ , ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣರಿಗೆ ಸುಳ್ಯದ ಕಾಂಗ್ರೇಸ್ ಮುಖಂಡರಿಂದ ಅಭಿನಂದನೆ

0

ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ ರವರಿಗೆ ಪೆರಾಜೆ ವಲಯ ಕಾಂಗ್ರೇಸ್ ವತಿಯಿಂದ ಹಮ್ಮಿಕೊಂಡ ಅಭಿನಂದನಾ ಮತ್ತು ಜನಸ್ಪಂದನಾ ಕಾರ್ಯಕ್ರಮದಲ್ಲಿ ಸುಳ್ಯದ ಕಾಂಗ್ರೇಸ್ ಮುಖಂಡರಿಂದ ಅಭಿನಂದನೆ ಸಲ್ಲಿಸಲಾಯಿತು.

ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡ, ಮಾಜಿ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಗೋಕುಲ್ ದಾಸ್ ಸುಳ್ಯ, ಭವಾನಿ ಶಂಕರ್ ಕಲ್ಮಡ್ಕ, ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಬಳ್ಳಡ್ಕ, ಚರಣ್ ಕಾಯರ ಅಭಿನಂದಿಸಿ ಗೌರವಿಸಿದರು.