ಜು.30: ಪೂದೆ ಶ್ರೀ ಗಣಪತಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮತ್ತು ಭಕ್ತಾದಿಗಳ ಸಭೆ

0

ಶ್ರೀ ಗಣಪತಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೂದೆ ಜೀರ್ಣೋದ್ಧಾರ ಸಮಿತಿ ಮತ್ತು ಭಕ್ತಾದಿಗಳ ಸಭೆಯು ಜು.30ರಂದು ಪೂರ್ವಾಹ್ನ 10.30 ಕ್ಕೆ ಶಾಸಕಿ ಕು. ಭಾಗೀರಥಿಯವರ ಅಧ್ಯಕ್ಷತೆಯಲ್ಲಿ ದೇವಾಲಯದ ವಠಾರದಲ್ಲಿ ಸಭೆ ನಡೆಯಲಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ರಾಂ ಸುಳ್ಳಿ ಹಾಗೂ ಇನ್ನಿತರ ಪ್ರಮುಖರು, ಅವಳಿ ದೇವಸ್ಥಾನಗಳ ಅಧ್ಯಕ್ಷರುಗಳು, ಸಮಿತಿ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಲ್ಲದೆ, ಕೂಡುಕಟ್ಟಿನ ಸಂಬಂಧಪಟ್ಟ ಗ್ರಾಮಗಳ, ಎಣ್ಮೂರು, ಮುರುಳ್ಯ, ಮುಪ್ಪೇರ್ಯ, ಬಾಳಿಲ,ಎಡಮಂಗಲಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಗಿದೆ.