ಸುಳ್ಯ ತಾ.ಪಂ. ಇ.ಒ. ಆಗಿ ರಾಜಣ್ಣ ಅಧಿಕಾರ ಸ್ವೀಕಾರ

0

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ರಾಜಣ್ಣ ಅವರು ಜು.28ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎನ್.ಭವಾನಿಶಂಕರ್ ಅವರು ಇವರಿಗೆ ಅಧಿಕಾರ ಹಸ್ತಾಂತರಿಸಿದರು.
ತಾ.ಪಂ. ಅಧಿಕಾರಿಗಳು‌ ಹಾಗೂ ಸಿಬ್ಬಂದಿಗಳು‌ ಉಪಸ್ಥಿತರಿದ್ದರು.

ರಾಜಣ್ಣ ಅವರು‌ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಹಿಂದೆ ಅವರು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರ ಪತ್ನಿ ಐವರ್ನಾಡಿನ ಬಾಂಜಿಕೋಡಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

ಭಾರತೀಯ ವಾಯು ಸೇನೆಯಲ್ಲಿ ಅಧಿಕಾರಿಯಾಗಿದ್ದು ನಿವೃತ್ತಿಯಾಗಿದ್ದ ಭವಾನಿಶಂಕರ್ ರವರು ಸುಳ್ಯ ತಾಲೂಕು ಪಂಚಾಯತ್ ನಲ್ಲಿ 4 ವರ್ಷ ಸಹಾಯಕ ನಿರ್ದೇಶಕರಾಗಿ ಹಾಗೂ ಕಳೆದ 4 ವರ್ಷಗಳಿಂದ ಇ.ಒ. ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ವರ್ಗಾವಣೆಯ ಸ್ಥಳ ನಿಗದಿಯಾಗಿಲ್ಲ.