ಉಸ್ಮಾನ್ ಕೊಲೆ ಪ್ರಕರಣ : ಇನ್ನೊಬ್ಬ ಆರೋಪಿ ಬಂಧನ

0


ದೊಡ್ಡಪ್ಪನ ಕೊಲೆಗೆ ಚೂರಿ ಒದಗಿಸಿದ ಆರೋಪ


ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಕೊಲೆಗೈಯ್ಯಲ್ಪಟ್ಟ ಉಸ್ಮಾನ್ ಕೊಲೆ ಕೇಸಿಗೆ ಸಂಬಂಧಪಟ್ಟು ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.


ಉಸ್ಮಾನ್‌ರನ್ನು ಕೊಲೆಗೈಯ್ಯಲು ಅವರ ಸಹೋದರರಾದ ರಫೀಕ್ ಮತ್ತು ಸತ್ತಾರ್ ಉಪಯೋಗಿಸಿದ ಚೂರಿಯನ್ನು ರಫೀಕ್ ಮತ್ತು ಸತ್ತಾರ್‌ರ ಸಹೋದರ ಅರಂತೋಡಿನಲ್ಲಿರುವ ಮಾಯಿನ್ ಕುಟ್ಟಿಯವರ ಪುತ್ರ ಮುಬಾರಕ್ ಒದಗಿಸಿದ್ದನೆಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.


ಮುಬಾರಕ್ (37 ವರ್ಷ) ಸುಳ್ಯ ಜೂನಿಯರ್ ಕಾಲೇಜು ಸಮೀಪದ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬೇಕರಿ ನಡೆಸುತ್ತಿದ್ದರು. ಕೊರೋನಾ ಕಾಲದ ಬಳಿಕ ಬೇಕರಿ ಬಂದ್ ಮಾಡಿ ಊರಿಗೆ ಬಂದು ನೆಲೆಸಿರುವ ಅವರಲ್ಲಿ ಬೇಕರಿಯ ಬ್ರೆಡ್ ಮತ್ತಿತರ ವಸ್ತುಗಳನ್ನು ಕತ್ತರಿಸುವ ಗಟ್ಟಿಯಾದ ಚೂರಿ ಇತ್ತೆನ್ನಲಾಗಿದೆ. ತನ್ನ ಚಿಕ್ಕಪ್ಪ ಮತ್ತು ದೊಡ್ಡಪ್ಪ ಕೇಳಿದ ಮೇರೆಗೆ ಕೊಲೆ ನಡೆಯುವ ಹಿಂದಿನ ದಿನ ಮುಬಾರಕ್ ಆ ಚೂರಿಯನ್ನು ಅವರಿಗೆ ಕೊಟ್ಟಿದ್ದನೆಂದು ಹೇಳಲಾಗಿದೆ.


ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಮಡಿಕೇರಿ ಸರ್ಕಲ್ ಇನ್‌ಸ್ಪೆಕ್ಟರ್ ಉಮೇಶ್ ಉಪ್ಪಳಿಕೆಯವರು ಜು. ೨೭ರಂದು ಸುಳ್ಯಕ್ಕೆ ದಾಳಿ ನಡೆಸಿ ಮುಬಾರಕ್‌ನನ್ನು ಬಂಧಿಸಿದರು. ನಿನ್ನೆ ಆರೋಪಿಯನ್ನು ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.